Monday, June 17, 2013

RATHAMUSALA: NOW PUBLISHED


English translation of my Rathamusla is now published.

Those who want to translate  and/ or stage this play, please contact me at the following address:

Dr. Ramachandra Deva
Care Bodhi Trust
Post Kalmadka 574212
Bellare, Karnataka, India.
Email: bodhitrustk@gmail. com
Phone: 9482622589

Those who want to buy copies, please contact

Bodhi Trust
Post Kalmadka 574212
Bellare, Karnataka, India
Email: bodhitrustk@gmail.com




Tuesday, May 21, 2013

ಸಿ ವಿಟಮಿನ್

ಇವತ್ತಿನ ಸುದ್ದಿ ಪ್ರಕಾರ ಔಷಧಿಯಿಂದ ಗುಣವಾಗದ ಒಂದು ಬಗೆಯ ಟೀಬಿ ಸಿ ವಿಟಮಿನ್ ಸೇವನೆಯಿಂದ ಗುಣವಾಗಿದೆಯಂತೆ. ವಿಜ್ಞಾನಿಗಳು ಇದನ್ನು ಆಕಸ್ಮಿಕವಾಗಿ ಪತ್ತೆ ಮಾಡಿದ್ದಾರೆ. ಈಗಾಗಲೇ ಇದು ಹೃದ್ರೋಗವೂ ಸೇರಿದಂತೆ ಬೇರೆ ಖಾಯಿಲೆಗಳಲ್ಲಿ ಪರಿಣಾಮಕಾರಿ ಎಂದು ಗೊತ್ತಾಗಿದೆ.

ಪ್ರಯೋಗಶೀಲ ವೈದ್ಯರು ವಿಟಮಿನ್ ಸಿಯ ಇನ್ನಷ್ಟು ಪ್ರಯೋಜನಗಳನ್ನು ಪತ್ತೆ ಮಾಡಿ ಹೇಳಬೇಕು. ಇದರ ಸೇವನೆಯಿಂದ ಸೈಡ್ ಎಫೆಕ್ಟ್ ಇಲ್ಲ; ತುಂಬಾ ಅಗ್ಗ; ಆಸ್ಪತ್ರೆ ವಾಸವನ್ನು ಮಿತಗೊಳಿಸಿಕೊಳ್ಳಬಹುದು. ಹಾಗಾಗಿಯೇ ಇದು ಜನರಿಗೆ ಗೊತ್ತಾಗಬೇಕು. ಆದರೆ ಇದನ್ನು ಹೇಳಬೇಕಾದವರು ನನ್ನಂಥವರು ಅಲ್ಲ. ಬಲ್ಲ ವೈದ್ಯರು ಇದರ ಬಗ್ಗ ಅನುಭವ ಪಡೆದು, ಪ್ರಯೋಗ ಮಾಡಿ ನೋಡಿ ಹೇಳಬೇಕು.

Wednesday, April 24, 2013

RATHAMUSALA

The covers of all my books published during the last four years are done by John Chandran, a young talented artist. The cover for Rathamusala in English is also designed by him.

The photo on the cover shows a scene from the original Kannada play directed by Krishna Kumar Narnakaje, and staged by Rangasiri, a drama troupe from Hassan, Karnataka.

The book will be available for sale in a few days. As usual, I started revising it again in the final stage, and hence the delay.

Sunday, April 21, 2013

ಮುರಳೀಧರ ಉಪಾಧ್ಯ

ಪೂರ್ಣಚಂದ್ರ ತೇಜಸ್ವಿ ಇದ್ದಾಗ ಕಂಪ್ಯೂಟರ್ ಮತ್ತು ಅದರ ಅಗತ್ಯಗಳ ಬಗ್ಗೆ ತುಂಬಾ ಹೇಳುತ್ತಿದ್ದರು. ಕಂಪ್ಯೂಟರನ್ನು ನಾವು ಕನ್ನಡಿಗರು ಸರಿಯಾಗಿ ಬಳಸಲು ಕಲಿಯದಿದ್ದರೆ ಜಾಗತಿಕ ವಲಯದಲ್ಲಿ ಹಿಂದುಳಿದು ಬಿಡುತ್ತೇವೆ ಎಂದು ಎಚ್ಚರಿಸುತ್ತಿದ್ದರು. ಉಳಿದು ಬಿಟ್ಟಿದ್ದೇವೆ ಎಂಬುದು ಕಂಪ್ಯೂಟರ್ ಬಳಸಿ ಇಂಗ್ಲಿಷಿನಂಥಾ ಭಾಷೆಯಲ್ಲಿ ನಡೆಯುತ್ತಿರುವ ಕೆಲಸ ನೋಡಿದರೆ ಗೊತ್ತಾಗುತ್ತದೆ. ನಮ್ಮಲ್ಲಿ ಹಣ ಇಲ್ಲ ಎನ್ನುವುದರಲ್ಲಿ ಅರ್ಥವಿಲ್ಲ. ಹೆಚ್ಚು ಹಣ ಖರ್ಚು ಮಾಡದೆ ಮಾಡಬಹುದಾದ ಕಂಪ್ಯೂಟರಿನ ಕೆಲವು ಸರಳ ಕೆಲಸಗಳನ್ನೂ ನಾವು ಮಾಡುತ್ತಿಲ್ಲ. ನಮ್ಮಲ್ಲಿ ಹೆಚ್ಚಿನ ಲೇಖಕರಿಗೆ ಇಮೇಲ್ ಇಲ್ಲ, ಬ್ಲಾಗ್ ಇಲ್ಲ ಎಂಬುದನ್ನು ಗಮನಿಸಿದರೆ ಮೇಲಿನ ಮಾತು ಅರ್ಥವಾಗುತ್ತದೆ. ಕಂಪ್ಯೂಟರ್ ನ ಅತ್ಯಂತ ಆಧುನಿಕ ತಂತ್ರಜ್ಞಾನ ಬಂದ ಮೇಲೂ ನಾವು ಅಚ್ಚಿನ ತಪ್ಪಿಲ್ಲದೆ ಪುಸ್ತಕ ಮುದ್ರಿಸುವುದನ್ನೇ ಕಲಿತಿಲ್ಲ. ತಿದ್ದುಪಡಿ ನಮ್ಮ ಪುಸ್ತಕಗಳ ವಿಶೇಷ ಲಕ್ಷಣವೇ ಆಗಿಬಿಟ್ಟಿದೆ.

ಇಂಥಲ್ಲಿ ಮುರಳೀಧರ ಉಪಾಧ್ಯ ಕಂಪ್ಯೂಟರ್ ಬಳಸಿ ಮಾಡುತ್ತಿರುವ ಕೆಲಸಗಳು ಸರ್ವತ್ರ ಮೆಚ್ಚುಗೆಗೆ ಅರ್ಹ. ಅವರು ಕನ್ನಡದ ಎಲ್ಲಾ ಬ್ಲಾಗುಗಳು ಒಂದು ಕಡೆ ನೋಡಲು ಸಿಗುವಂತ ಮಾಡಿದ್ದಾರೆ; ಅದರಲ್ಲಿ ಮುಖ್ಯವಾದ ಲೇಖನ ಭಾಷಣ ಬೇಕಾದವರಿಗೆ ಸಿಗುತ್ತವೆ; ಮೊನ್ನೆ ಆಡಿಯೋದ ಮೂಲಕ ಲೇಖಕರೋ ವಿದ್ವಾಂಸರೋ ಓದಿದ ಪದ್ಯ ಅಥವಾ ಅವರ ಭಾಷಣ, ಮಾತು ತರುಣ ಅಧ್ಯಾಪಕರಿಗೆ, ಲೇಖಕರಿಗೆ, ವಿದ್ವಾಂಸರಿಗೆ ಸಿಗುವ ಹಾಗೆ ಮಾಡುವ ಬಗ್ಗೆ ಮಾತಾಡಿದರು. ನಮ್ಮಲ್ಲಿ ಇಂದು ಚಿದಾನಂದಮೂರ್ತಿ, ಕಲಬುರ್ಗಿಯವರಂಥಾ ದೊಡ್ಡ ವಿದ್ವಾಂಸರು, ಭೈರಪ್ಪನವರಂಥಾ ಬಹು ಶ್ರೇಷ್ಠ ಸೃಜನಶೀಲ ಲೇಖಕರು ಇದ್ದಾರೆ; ತಿರುಮಲೇಶ್, ಲಕ್ಷ್ಮಣ ರಾವ್ ಅಂಥಾ ಒಳ್ಳೆಯ ಕವಿಗಳಿದ್ದಾರೆ. ಇವರ ಮಾತು, ಕಾವ್ಯ ತರುಣರಿಗೆ ಆಸಕ್ತರಿಗೆ ಕಂಪ್ಯೂಟರ್ ಮೂಲಕ ಸಿಗುವ ಹಾಗೆ ಮಾಡುವುದರಲ್ಲಿ ಮುರಳೀಧರರ ಕೆಲಸ ಮುಖ್ಯ.

ಇಂಗ್ಲಿಷಿನಲ್ಲಿ ಇಂದು ಎಲಿಯಟ್, ಯೇಟ್ಸ್ ಮೊದಲಾದವರು ಸ್ವತಃ ಓದಿದ ಅವರ ಪದ್ಯಗಳು ಕೇಳಲು ಸಿಗುತ್ತವೆ. ಕನ್ನಡದಲ್ಲಿ ಬೇಂದ್ರೆ ಅಡಿಗರು ಮೊದಲಾದವರ ಕವನಗಳನ್ನು ಹೀಗೆಯೇ ನಾವು ಆಸಕ್ತರಿಗೆ ತಲುಪಿಸಬಹುದು. ಅವರ ರೆಕಾರ್ಡಿಂಗುಗಳನ್ನು ಪತ್ತೆ ಮಾಡಿ ವ್ಯವಸ್ಥಿತವಾಗಿ ಕಂಪ್ಯೂಟರಿನಲ್ಲಿ ಇಡಬೇಕಾಗಿದೆ. ಸಾಹಿತ್ಯಿಕ ಚರ್ಚೆಗಳೂ ಖಾಯಮ್ಮಾಗಿ ಕೇಳುವಂತೆ ಮಾಡಬಹುದು. ಆ ಕಡೆಗೆ ಉತ್ಸಾಹದಿಂದ ಕೆಲಸ ಮಾಡುತ್ತಿರುವವರಲ್ಲಿ ಮುರಳೀಧರ ಪ್ರಮುಖರು.

ಬಿಎಂಶ್ರೀಯವರ ಕಾಲದಲ್ಲಿ ಇಂಥಾ ಸೌಲಭ್ಯ ಇಲ್ಲದಿದ್ದಾಗ ಊರೂರು ತಿರುಗಿ ಕನ್ನಡದ ಪ್ರಚಾರ ಮಾಡಬೇಕಾಗಿತ್ತು. ಅವರು ಮಾಡಿದರು. ಶಿವರಾಮ ಕಾರಂತರು, ಅವರ ಓರಗೆಯ ಬೇರೆ ಕೆಲವರು ಲೇಖಕರು ಎಲ್ಲಿಗೇ ಕರೆದರೂ ಹೋಗಿ ಭಾಷಣ ಮಾಡುತ್ತಿದ್ದರು. ಇಂದು ಕಂಪ್ಯೂಟರ್ ಇರುವುದರಿಂದ ಲೇಖಕರು ಮನೆಯಲ್ಲಿ ಕೂತೇ ತಮ್ಮ ಓದುಗರನ್ನು ಉದ್ದೇಶಿಸಿ ಮಾತಾಡಲು, ಪದ್ಯ ಓದಲು ಸಾಧ್ಯ. ಅಂಥಾ ಒಂದು ಸಾಧ್ಯತೆಯನ್ನು ತಮ್ಮ ಸೀಮಿತ ಸಂಪನ್ಮೂಲಗಳನ್ನೇ ಬಳಸಿ ಅನ್ವೇಷಿಸುತ್ತಿರುವ ಹೊಸತರ ಹರಿಕಾರರಾಗಿ ನನಗೆ ಮುರಳೀಧರ ಕಾಣಿಸುತ್ತಾರೆ.

ಅನೇಕರು ಉದ್ಯೋಗದಿಂದ ನಿವೃತ್ತರಾದ ಮೇಲೆ ಮನೆಯಲ್ಲಿ ಸುಮ್ಮನೆ ಕೂತರೆ ಇವರು ನಿವೃತ್ತ ಜೀವನವನ್ನು ಹೊಸರೀತಿಯಲ್ಲಿ ಸೃಜಶೀಲರಾಗಲು ಬಳಸಿಕೊಳ್ಳುತ್ತಿದ್ದಾರೆ. ಅದು ಭವಿಷ್ಯದಲ್ಲಿ ಕನ್ನಡಕ್ಕೆ ಬಹು ಹೆಚ್ಚಿನ ಅರ್ಥಪೂರ್ಣತೆ ತಂದುಕೊಡಬಲ್ಲ ಸೃಜನಶೀಲತೆ.

Tuesday, March 26, 2013

ಎಸ್.ಎಲ್. ಭೈರಪ್ಪ

ನನ್ನ ಹೊಸ ಪುಸ್ತಕ ಆರಣ್ಯಕರ ಸುತ್ತಮುತ್ತದಲ್ಲಿ ಭೈರಪ್ಪನವರ ಮೇಲೆ ಒಂದು ಲೇಖನವಿದೆ. ಇದು "ಒಂದು ತಲೆಮಾರಿನ ಕೆಲವರು ಲೇಖಕರು" ಎಂಬ 62 ಪುಟಗಳ ಒಂದು ಲೇಖನದ ಭಾಗ. ಇದರ ಸ್ಥೂಲ ರೂಪ ನಾನು 2011ರಲ್ಲಿ ವಿಜಯವಾಣಿಯಲ್ಲಿ ಬರೆಯುತ್ತಿದ್ದ ಅಂಕಣದಲ್ಲಿ ಪ್ರಕಟವಾಗಿತ್ತು. ಪುಸ್ತಕದಲ್ಲಿ ಲೇಖನವಾಗಿ ಬರುವಾಗ ಹೆಚ್ಚು ವಿವರ ಉದಾಹರಣೆಗಳು ಸೇರಿವೆ. ಅದರ ಕೊನೆಯ ಪ್ಯಾರಾ ಕೆಳಗೆ ಕೊಟ್ಟಿದ್ದೇನೆ. ನನ್ನ ಈ ನಿಲುವು ಇಂದು ಚಾಲ್ತಿಯಲ್ಲಿರುವ ಅನೇಕರು ತೆಗೆದುಕೊಂಡ ನಿಲುವಿಗೆ ತದ್ವಿರುದ್ಧವಾದದ್ದು. ಇದು ಚರ್ಚೆಯಾಗಲಿ, ಭೈರಪ್ಪನವರ ಕಾದಂಬರಿಗಳು ವಿಮರ್ಶಾಕ್ಷೇತ್ರದಲ್ಲಿ ಅವುಗಳ ಸರಿಯಾದ ಸ್ಥಾನದಲ್ಲಿ ಗುರುತಿಸಲ್ಪಡಲಿ ಎಂಬ ದೃಷ್ಟಿ ಹೀಗೆ ನನ್ನ ನಿಲುವಿನ ಸಾರಾಂಶವಾದ ಕೊನೆಯ ಪ್ಯಾರಾ ಕೊಡುವುದರ ಹಿಂದೆ ಇದೆ.

 ನಾನು ಚರ್ಚೆಯಾಗಲಿ ಎಂದು ಬಯಸುವ ಲೇಖನದ ಕೊನೆಯ ಆ ಪ್ಯಾರಾ ಹೀಗಿದೆ:

"ಅನಂತಮೂರ್ತಿ ಜೊತೆಗೆ ಭೈರಪ್ಪನವರನ್ನು ಹೋಲಿಸುವಂತೆ ಅನಂತಮೂರ್ತಿಯವರೇ ಒತ್ತಾಯಿಸುತ್ತಾರೆ. ಯಾಕೆಂದರೆ ಅವರನ್ನು ಜನಪ್ರಿಯ ಕಾದಂಬರಿಕಾರ, ಗಂಭೀರ ಪರಿಶೀಲನೆಗೆ ಅರ್ಹ ಅಲ್ಲ ಎಂಬ ರೀತಿಯಲ್ಲಿ ಬರೆದವರು ಅನಂತಮೂರ್ತಿಯವರೇ. ಆದರೆ ಪರ್ವ ಮತ್ತು ಆನಂತರದ ಕಾದಂಬರಿಗಳಲ್ಲಿ-- ಆವರಣ ಹೊರತುಪಡಿಸಿ-- ಚಿತ್ರಿತವಾಗುವ ಅನುಭವ ವಿಸ್ತಾರ, ಪಾತ್ರ ಚಿತ್ರಣ, ವ್ಯಾಪ್ತಿಗಳು ಅವರನ್ನು ಒಬ್ಬ ಶ್ರೇಷ್ಠ ಕಾದಂಬರಿಕಾರರನ್ನಾಗಿ ಮಾಡಿವೆ. ಅನಂತಮೂರ್ತಿಯವರು ತಮ್ಮ ವಿಮರ್ಶೆ, ಸಾಮಾಜಿಕ ಚಟುವಟಿಕೆ ಮೊದಲಾದವುಗಳಿಂದ ಮುಖ್ಯ ಸಾಹಿತ್ಯಿಕ ಪುರುಷ ನಿಜ; ಆದರೆ ಕಾದಂಬರಿಕಾರರಾಗಿ ಪರ್ವದ ನಂತರದ ಭೈರಪ್ಪನವರೇ ಅವರಿಗಿಂಥ ಶ್ರೇಷ್ಠ. ಭೈರಪ್ಪನವರ ದೃಷ್ಟಿಕೋನ ನನ್ನ ದೃಷ್ಟಿಕೋನ ಅಲ್ಲ ಎಂಬುದು ಅವರ ಉತ್ತಮಿಕೆಯನ್ನು ಮೆಚ್ಚಲು ನನಗೆ ತೊಂದರೆ ಆಗಿಲ್ಲ-- ಎಲಿಯಟ್ ನ ಕ್ರಿಶ್ಚಿಯನ್ ದೃಷ್ಟಿಕೋನ, ಶೇಕ್ ಸ್ಪಿಯರ್ ನ ವಂಶಪಾರಂಪರ್ಯ-ರಾಜತ್ವ-ನಿಷ್ಠ-ದೃಷ್ಟಿಕೋನ ಅವರ ಕೃತಿಗಳನ್ನು ಮೆಚ್ಚಲು ಹೇಗೆ ತೊಂದರೆ ಆಗಿಲ್ಲವೋ ಹಾಗೆ."

Thursday, March 21, 2013

ಹುಟ್ಟುಹಬ್ಬದ ಪುಸ್ತಕ



ಮೇಲಿನದ್ದು ನನ್ನ ಹೊಸ ಪುಸ್ತಕ. ಇದರ ಪ್ರಕಾಶಕರು ಮಿತ್ರ ಶಿವಾನಂದ ಗಾಳಿ. ಇವತ್ತಿನ ನನ್ನ ಹುಟ್ಟು ಹಬ್ಬದ ಪ್ರಯುಕ್ತ ಇದನ್ನು ಉಡುಗೊರೆ ಎಂದು ಪ್ರಕಟಿಸಿ ಪ್ರತಿ ಕಳಿಸಿದ್ದಾರೆ. ನನ್ನ ಮೇಲಿನ ಅವರ ಪ್ರೀತಿಗೆ ಮನಸ್ಸು ತುಂಬಿಬಂದಿದೆ. ಅವರಿಗೆ, ಅವರ ಬಳಗಕ್ಕೆ ಕೃತಜ್ಞ ಎಂದಷ್ಟೇ ಹೇಳಬಲ್ಲೆ.

ಪೀಟರ್ ಬ್ರೂಗೆಲ್ ನ ಇಕಾರಸ್ ಪೇಂಟಿಂಗ್ ಇರುವ ಈ ಮುಖಪುಟದ ವಿನ್ಯಾಸ ಖ್ಯಾತ ಕಲಾವಿದ ಜಾನ್ ಚಂದ್ರನ್ ಅವರದ್ದು.

ಇದರಲ್ಲಿ ಉಪನಿಷತ್ತುಗಳು, ಪಂಪ, ಕನಕದಾಸ, ಶಾಂತಿನಾಥ ದೇಸಾಯಿ, ಮುಳಿಯ ತಿಮ್ಮಪ್ಪಯ್ಯ, ಚಿದಾನಂದಮೂರ್ತಿ, ಭೈರಪ್ಪ, ಯರ್ಮುಂಜ ರಾಮಚಂದ್ರ ಮೊದಲಾದವರ ಮೇಲೆ ಲೇಖನಗಳಿವೆ. 188 ಪುಟಗಳು. ಬೆಲೆ ರೂ90.00.

ಪ್ರಕಾಶಕರ ವಿಳಾಸ:

ಸುಂದರ ಪುಸ್ತಕ ಪ್ರಕಾಶನ
79, ಚಂದ್ರಕಿರಣ, ಎರಡನೆಯ ತಿರುವು,
ಎರಡನೆಯ ಮುಖ್ಯ ರಸ್ತೆ, ಶಕ್ತಿ ನಗರ
ಧಾರವಾಡ --580004

Sunday, March 17, 2013

RATHAMUSALA IN ENGLISH

English translation of my Kannada play Rathamusala is to be published next month. It is ready.

The above are some of the photos of the production of the original Kannada play directed by Krishna Kumar Narnakaje, and produced by Rangasiri, Hassan. This production won the first prize in a competition in Udupi.